ಚಂದಿರ ನಿನ್ನ ಹೊಗಳಿದ್ದ ಕಾರಣ
ಮುನಿಸು ಬೆಳದಿಂಗಳಿಗೆ..
ರವಿಯೂ ನೋಡಿದಕ್ಕೆ ನಿನ್ನ
ಕೋಪ ಸೂರ್ಯಕಾಂತಿಗೆ ...
ಕಾರ್ಮೋಡ ನಿನಗೆ ತಂಪು ತರಲು
ಮಿಂಚು ಗುಡುಗಿದ್ದಾಳೆ ತಾ ಬಾರದೆ..
ಸಾಗರವು ನಿನ್ನನ್ನಪ್ಪಲು ಅಲೆಯಾದಾಗ
ನದಿಗಳೆಲ್ಲಾ ಅತ್ತು ,
ಉಪ್ಪು ತುಂಬಿದರು ಅವನ ಎದೆಯೊಳಗೆ...
ವರ್ಣಿಸಲು ನಿನ್ನ ಸಾಧ್ಯವಾಗದೆ
ವ್ಯಾಕರಣವೂ ಪರದಾಡಿದೆ
ಉಪಮೇಯ ಸಿಗದೆ...
ನಿನ್ನ ನೆರಳು ಭುವಿಯ ಸೋಕುವಾಗ
ತಗುಲದಿರಲಿ ಕಲ್ಲೆಂದು
ಹುಲ್ಲುಗಾವಲೇ ನಿನ್ನ ಹಾದಿಯಾಗಿದೆ....
ಕಂಡ ಕ್ಷಣವೇ ನಿನ್ನ,
ನಾ ಕವಿಯಾಗಲು....
ಹೇಗೆ ತಾನೇ ಸಾಧ್ಯ???
ಹೇಳು ನಿನ್ನ ,
ನಾ ಪ್ರೀತಿಸದೇ ಇರಲು....