ಅಂದಿದ್ದ ಜೋಡುಮರ
ಇಂದೇಕೋ ಒಂಟಿಯಾಗಿ
ಬಿರುಗಾಳಿಗೆ ಸಿಲುಕಿ
ನೆಲಕ್ಕುರಿಳಿದ ಸಂಗಾತಿಯ
ದಿಟ್ಟಿಸುತ್ತಾ ತಲೆಬಾಗಿ ನಿಂತಿದೆ..
ಮಿಲನದ ಶತ್ರು ಬಿರುಗಾಳಿ
ಕರುಣೆಯೇ ಇಲ್ಲದಂತೆ
ಉರುಳಿ ಬಿದ್ದ ಮರದ
ಕುರುಹೂ ಬಿಡಬಾರದೆಂದು ಬೀಸಲು,
ಪಾಪ! ನೋಡಲಾರದೆ ಆ ಒಂಟಿ ಮರ
ತನಗಾಗಿ ಕಣ್ನೀರಿಡಲು
ಕಾರ್ಮೋಡಗಳ ಮೊರೆ ಇಟ್ಟಿದೆ...
ಅಳಲು ಜೋರಾಗಿ ಎಲ್ಲಾ ಮೋಡಗಳು
ದಾರುಳ ಆಕ್ರಂಧನ ಕಿವಿಗೆ ರಾಚಿದೆ...
ಸಮಸ್ತ ಮಳೆಹನಿಗಳು ಧರೆಗುರುಳಿ
ಕೊನೆಗೂ ಬಿರುಗಾಳಿ
ಮೌನ ತಾಳಲು
ಏಕಾಂಗಿಯಾದ ಮರಕ್ಕೆ
ನಿಶಬ್ಧದೊಂದಿಗೆ ಏಕಾಂತ
ಮಾತ್ರ ಜೊತೆಯಾಗಿದೆ....
ಮನ ಕುಲುಕುವ ಚಿತ್ರ ಕಾವ್ಯ.
ReplyDeleteಜೋಡಿ ಮರ ಒಂಟಿಯಾದಾಗ ಎಷ್ಟು ನೊಂದಿದೆಯೇ ಅದರ ಮಾತು ಕೇಳುವ ಸೌಭಾಗ್ಯವಾದರೂ ನಮಗೆಲ್ಲಿದೆ.
ನನ್ನ ಬ್ಲಾಗಿಗೂ ಸ್ವಾಗತ.
ನಿಮ್ಮ ಮೆಚ್ಚುಗೆ ನುಡಿಗಳಿಗೆ ಧನ್ಯವಾದಗಳು sir:):):)
ReplyDelete