Sunday 8 July 2012

...ಏಕಾಂತ...







 ಅಂದಿದ್ದ ಜೋಡುಮರ
ಇಂದೇಕೋ ಒಂಟಿಯಾಗಿ
ಬಿರುಗಾಳಿಗೆ ಸಿಲುಕಿ
ನೆಲಕ್ಕುರಿಳಿದ ಸಂಗಾತಿಯ 
ದಿಟ್ಟಿಸುತ್ತಾ ತಲೆಬಾಗಿ ನಿಂತಿದೆ..
ಮಿಲನದ ಶತ್ರು ಬಿರುಗಾಳಿ
ಕರುಣೆಯೇ ಇಲ್ಲದಂತೆ 
ಉರುಳಿ ಬಿದ್ದ ಮರದ
ಕುರುಹೂ ಬಿಡಬಾರದೆಂದು ಬೀಸಲು,
ಪಾಪ! ನೋಡಲಾರದೆ ಆ ಒಂಟಿ ಮರ
ತನಗಾಗಿ ಕಣ್ನೀರಿಡಲು 
ಕಾರ್ಮೋಡಗಳ ಮೊರೆ ಇಟ್ಟಿದೆ...
ಅಳಲು ಜೋರಾಗಿ ಎಲ್ಲಾ ಮೋಡಗಳು
ದಾರುಳ ಆಕ್ರಂಧನ ಕಿವಿಗೆ ರಾಚಿದೆ...
ಸಮಸ್ತ ಮಳೆಹನಿಗಳು ಧರೆಗುರುಳಿ 
ಕೊನೆಗೂ ಬಿರುಗಾಳಿ
ಮೌನ ತಾಳಲು 
ಏಕಾಂಗಿಯಾದ ಮರಕ್ಕೆ
ನಿಶಬ್ಧದೊಂದಿಗೆ ಏಕಾಂತ
ಮಾತ್ರ ಜೊತೆಯಾಗಿದೆ....

2 comments:

  1. ಮನ ಕುಲುಕುವ ಚಿತ್ರ ಕಾವ್ಯ.

    ಜೋಡಿ ಮರ ಒಂಟಿಯಾದಾಗ ಎಷ್ಟು ನೊಂದಿದೆಯೇ ಅದರ ಮಾತು ಕೇಳುವ ಸೌಭಾಗ್ಯವಾದರೂ ನಮಗೆಲ್ಲಿದೆ.

    ನನ್ನ ಬ್ಲಾಗಿಗೂ ಸ್ವಾಗತ.

    ReplyDelete
  2. ನಿಮ್ಮ ಮೆಚ್ಚುಗೆ ನುಡಿಗಳಿಗೆ ಧನ್ಯವಾದಗಳು sir:):):)

    ReplyDelete

ಅವಳ್ಯಾರು?

ಪ್ರಿಯ ಓದುಗರೇ, ಸಮಯ, ಕನಸು, ವಾಸ್ತವ ಇವೆಲ್ಲದರ ನಡುವೆ ನಡೆಯುವ ಜೀವನ ಎಷ್ಟು ನಿಜ? ಎಷ್ಟು ಕಲ್ಪನೆ? ಕಥಾನಾಯಕಿಯ ಈ ಆಸಕ್ತಿದಾಯಕ ಬದುಕಲ್ಲಿ ನೀವೂ ಭಾಗಿಯಾ...